ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಜ್ಞಾನ ದೇವತೆಯ ದೇಗುಲ ಶೃಂಗೇರಿ ಶಾರದಾ ಪೀಠ
ಶೃಂಗೇರಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ, ಮಲೆನಾಡಿನ ತಪ್ಪಲಲ್ಲಿರುವ ಒಂದು ಪುಟ್ಟ ಪಟ್ಟಣ. ಶ್ರೀ ಶಾರದಾಂಬೆಯ ದೇಗುಲಕ್ಕೆ ಹೆಸರುವಾಸಿಯಾಗಿರುವ ಈ ಪಟ್ಟಣವು ಕರ್ನಾಟಕದ ಪವಿತ್ರ ನದಿ ತುಂಗಾ ನದಿಯ ದಡದಲ್ಲಿದೆ. ಶೃಂಗೇರಿ ಕರ್ನಾಟಕದ ಪ್ರಮುಖ ನಗರಗಳಾಗಿರುವ ಮಂಗಳೂರಿನಿಂದ 107 ಕಿಮೀ ಮತ್ತು ಬೆಂಗಳೂರಿನಿಂದ 336 ಕಿಮೀ ದೂರದಲ್ಲಿದೆ. ಮಂಗಳೂರಿನಿಂದ ಕಾರ್ಕಳ ಮಾರ್ಗವಾಗಿ ಈ ಪಟ್ಟಣವನ್ನು ಸುಲಭವಾಗಿ ತಲುಪಬಹುದು. ಬೆಂಗಳೂರಿನಿಂದ ಹಾಸನ ಅಥವಾ ಶಿವಮೊಗ್ಗ ಮೂಲಕ ಇಲ್ಲಿಗೆ ತಲುಪಬಹುದು. ಶ್ರೀ ಶಾರದಾಂಬಾ ಮತ್ತು ವಿದ್ಯಾಶಂಕರ ದೇವಸ್ಥಾನ, ಶೃಂಗೇರಿ (ಶೃಂಗೇರಿ […]

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದದಲ್ಲಿರುವವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ ದೇಗುಲವಾಗಿದ್ದು, ಇದುಅನನ್ಯ, ಅಸಾಧಾರಣ, ವಿಶಿಷ್ಟ ಬಗೆಯ ವಾಸ್ತುಶಿಲ್ಪ ಮತ್ತು ಸರಿಸಾಟಿಯಿಲ್ಲದಕರಕುಶಲತೆಯ ಶಿಲ್ಪಕಲಾ ವೈಭವಕ್ಕೆ ಜಗತ್ಪ್ರಸಿದ್ಧವಾಗಿದೆ. ಇದು ಹಂಪಿಯ ಅತಿ ದೊಡ್ಡಮತ್ತು ಅತ್ಯಂತ ಜನಪ್ರಿಯ ದೇವಾಲಯ. ಇದು ಹಂಪಿಯ ಈಶಾನ್ಯ ಭಾಗದಲ್ಲಿದೆ. ಈ ದೇಗುಲದ ಶಿಲ್ಪಕಲೆ, ಸೌಂದರ್ಯವನ್ನು […]

ಕೋವಿಡ್ ಸಂತ್ರಸ್ತ ಮಕ್ಕಳಿಗೆ ಬಾಲ ಸ್ವರಾಜ್ – ಬಾಲ ಸೇವಾ ಯೋಜನೆ
ಕೋವಿಡ್ ೧೯ ಸಾಂಕ್ರಾಮಿಕ ರೋಗ ಹಲವಾರು ಚಿಕ್ಕ ಮಕ್ಕಳನ್ನು ಅನಾಥವಾಗಿಸಿದೆ. ಈ ಹಿನ್ನಲೆಯಲ್ಲಿ ನೊಂದ ಮಕ್ಕಳ ರಕ್ಷಣೆ ಹಾಗು ಪೋಷಣೆಗೆ ಕೇಂದ್ರ ಹಾಗು ರಾಜ್ಯ ಸರಕಾರಗಳೆರಡೂ ಮುಂದಾಗಿವೆ. ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಹಾಗು ಕೇಂದ್ರ ಸರಕಾರ ಬಾಲ್ ಸ್ವರಾಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಕೋವಿಡ್ ೧೯ ಮೊದಲ ಹಾಗು ದ್ವಿತೀಯಯ ಅಲೆಗಳಲ್ಲಿ ದೇಶಾದ್ಯಂತ ಸುಮಾರು ೩೦,೦೦೦ ಕ್ಕೂ ಅಧಿಕ ಕುಟುಂಬಗಳಲ್ಲಿ ಮಕ್ಕಳು ತಮ್ಮ ಇಬ್ಬರು ಪೋಷಕರು […]
