ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಹಂಪಿಯ ಮುಕುಟಮಣಿ: ಸೌಂದರ್ಯದ ಖನಿ ಈ ಕಲ್ಲಿನ ಕಥ
ಕೇಳಿಸದೆ ಕಲ್ಲು ಕಲ್ಲಿನಲಿ….ಈ ಗೀತೆಯನ್ನು ಕೇಳಿದಾಗಲೆಲ್ಲಾ ಕನ್ನಡಿಗರ ಮೈ ರೋಮಾಂಚನಗೊಳ್ಳುತ್ತದೆ. ಹಂಪಿಯ ಕಲ್ಲಿನ ಕಲಾಕೆತ್ತನೆಗಳು ಕಲಾ ಕುಸುರಿಗಳು ನಮ್ಮ ಕಣ್ಮುಂದೆ ಸುಳಿಯುತ್ತವೆ. ನಮ್ಮಲ್ಲಿನ ಪ್ರವಾಸಿ ತಾಣಗಳ ವೈಶಿಷ್ಟ್ಯತೆ ಎಂದರೆ, ಪ್ರತಿಯೊಂದು ಪ್ರವಾಸಿ ತಾಣವೂ, ಒಂದೊಂದು ವಿಶಿಷ್ಟ ಆಕರ್ಷಣೆಯನ್ನು ಹೊಂದಿರುತ್ತದೆ. ಅದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುತ್ತದೆ. ಅದು ಆ ಸ್ಥಳದ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಮಾತಿಗೆ ಹಂಪಿ ಕೂಡಾ ಹೊರತಲ್ಲ. ಒಂದು ಪುಟ್ಟ ಹಳ್ಳಿಯಾದ ಹಂಪಿ ಇಂದು ವಿಶ್ವದೆಲ್ಲೆಡೆ ಪ್ರಸಿದ್ಧ. ಈ ಪ್ರಖ್ಯಾತಿಗೆ ಪ್ರಮುಖ ಕಾರಣ, ಇಲ್ಲಿನ ಕಲ್ಲಿನ […]

ಕಲ್ಲಲ್ಲಿ ಅರಳಿದ ಸೌಂದರ್ಯದ ಖನಿ ಈ ಕಮಲ ಮಹಲ್
ನಿಮ್ಮ ಹಂಪಿ ಪ್ರವಾಸ ಲೋಟಸ್ ಮಹಲ್ (ಕಮಲ ಮಹಲ್) ಗೆ ಭೇಟಿ ನೀಡದೆ ಪೂರ್ಣವಾಗುವುದಿಲ್ಲ. ಹಂಪಿಯ ಪ್ರಮುಖ ವಾಸ್ತುಶಿಲ್ಪ ವಿನ್ಯಾಸ -ಅದ್ಭುತಗಳಲ್ಲಿ ಇದು ಒಂದು. ಇದರ ವಿನ್ಯಾಸ ಕಮಲದ ರೀತಿಯಲ್ಲಿದೆ. ಹೀಗಾಗಿ ಇದು ಲೋಟಸ್ ಮಹಲ್ ಎಂದೇ ಪ್ರಸಿದ್ಧ. ಈ ಅದ್ಭುತ ಅರಮನೆ ಹಂಪಿಯ ಜೆನಾನಾ ಭಾಗದಲ್ಲಿದೆ. ಇದು ವಿಜಯನಗರ ಅರಸರ ರಾಣಿಯರ ಹಾಗು ಇತರ ಮಹಿಳಾ ಸದಸ್ಯರ ಬಳಕೆಗೆ ನಿರ್ಮಾಣಗೊಂಡ ಅನನ್ಯ ಅರಮನೆ. ಲೋಟಸ್ ಮಹಲ್ ಗೆ ಇನ್ನೂ ಎರಡು ಹೆಸರುಗಳಿವೆ. ಈ ಅರಮನೆಯನ್ನು ಕಮಲ್ […]

ಕನ್ನಡ ನೆಲದ ನಾಡದೇವತೆ ಮೈಸೂರಿನ ಶ್ರೀ ಚಾಮುಂಡೇಶ್ವರಿ
ಈ ಭಜನಾ ಪದ್ಯ ಕೇಳಿ ಬಾರದ ಮನೆಗಳು ಕರ್ನಾಟಕದಲ್ಲಿಲ್ಲ. ಈ ಭಜನೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಸ್ತುತಿ. ಕರ್ನಾಟಕದ ನಾಡದೇವತೆ ಎಂದೇ ಪ್ರಸಿದ್ದವಾಗಿರುವ ಶ್ರೀ ಚಾಮುಂಡೇಶ್ವರಿ ದೇಗುಲದ ಬಗ್ಗೆಗಿನ ವಿವರ ಇಲ್ಲಿದೆ. ಕರ್ನಾಟಕದ ಪ್ರಸಿದ್ಧ ದೇವಾಲಯಗಳ ಸಾಲಿನಲ್ಲಿ ಚಾಮುಂಡಿ ಬೆಟ್ಟ ಎಂದು ಕರೆಯಲ್ಪಡುವ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಮುಂಚೂಣಿಯಲ್ಲಿ ನಿಲ್ಲುತ್ತದೆ. ಮೈಸೂರು ಹಾಗು ಸುತ್ತಮುತ್ತಲಿನ ಭಕ್ತರೊಂದಿಗೆ ಇತರೆ ರಾಜ್ಯಗಳ ಭಕ್ತಸಾಗರವೂ ಇಲ್ಲಿಗೆ ಹರಿದುಬರುತ್ತದೆ. ಕರ್ನಾಟಕದಲ್ಲಿ ಕೊಲ್ಲೂರು, ಕಟೀಲು, ಹೊರನಾಡು, ಶೃಂಗೇರಿ, ಸವದತ್ತಿ, ಬನಶಂಕರಿ ಹೀಗೆ ವಿವಿಧೆಡೆಯಲ್ಲಿ ಅತಿ […]
