ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದದಲ್ಲಿರುವವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ ದೇಗುಲವಾಗಿದ್ದು, ಇದುಅನನ್ಯ, ಅಸಾಧಾರಣ, ವಿಶಿಷ್ಟ ಬಗೆಯ ವಾಸ್ತುಶಿಲ್ಪ ಮತ್ತು ಸರಿಸಾಟಿಯಿಲ್ಲದಕರಕುಶಲತೆಯ ಶಿಲ್ಪಕಲಾ ವೈಭವಕ್ಕೆ ಜಗತ್ಪ್ರಸಿದ್ಧವಾಗಿದೆ. ಇದು ಹಂಪಿಯ ಅತಿ ದೊಡ್ಡಮತ್ತು ಅತ್ಯಂತ ಜನಪ್ರಿಯ ದೇವಾಲಯ. ಇದು ಹಂಪಿಯ ಈಶಾನ್ಯ ಭಾಗದಲ್ಲಿದೆ. ಈ ದೇಗುಲದ ಶಿಲ್ಪಕಲೆ, ಸೌಂದರ್ಯವನ್ನು […]

ಅತ್ಯುತ್ತಮ ಮುತ್ಸದ್ದಿ – ಅಪ್ರತಿಮ ಅಭಿಯಂತರ ಸರ್ ಎಂ ವಿಶ್ವೇಶ್ವರಯ್ಯ
ವಿಶ್ವದಾದ್ಯಂತ ಸರ್ ಎಂ.ವಿ ಎಂದೇ ಜನಪ್ರಿಯವಾಗಿರುವ ಸರ್ ಎಂ ವಿಶ್ವೇಶ್ವರಯ್ಯ ದೇಶ ಕಂಡ ಅತ್ಯುತ್ತಮ ಅಭಿಯಂತರ, ಜನಪ್ರಿಯ ಮುತ್ಸದ್ದಿ, ಹಾಗು ವಿದ್ವಾಂಸ. ಇವರು 1912-1918ರ ಅವಧಿಯಲ್ಲಿ ಮೈಸೂರಿನ ಹಿಂದಿನ ರಾಜಾಡಳಿತದಲ್ಲಿ ದಿವಾನ್ ಆಗಿ ಸೇವೆ ಸಲ್ಲಿಸಿದ್ದರು. 1955 ರಲ್ಲಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾರ್ವಜನಿಕ ಕಲ್ಯಾಣ- ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳಿಗಾಗಿ, ಅವರನ್ನು ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಅವಧಿಯಲ್ಲಿ ಕಿಂಗ್ ಜಾರ್ಜ್ V ನೈಟ್ ಕಮಾಂಡರ್ ಪದವಿಯೊಂದಿಗೆ ಗೌರವಿಸಿದ್ದರು. ಸರ್ ಎಂ ವಿ […]

ಕರ್ನಾಟಕದಲ್ಲಿ ಸರಿಯಾದ ಪಿಯು ಕಾಲೇಜು ಆಯ್ಕೆ
ಕರ್ನಾಟಕದಲ್ಲಿ ಪಿಯುಸಿ ಅಧ್ಯಯನ ಮಾಡಲು ಇಚ್ಛೆ ಇದೆಯಾ? ಹಾಗಾದರೆ ಇಲ್ಲಿನ ಪಿಯು ಕಾಲೇಜುಗಳ ಬಗ್ಗೆ ತಿಳಿದು ಕೊಳ್ಳೋಣ. ಪಿಯು ಕೋರ್ಸ್, ಐಚ್ಚಿಕ ವಿಷಯಗಳ ಬಗ್ಗೆ ನಿಮಗೆ ಇಲ್ಲಿ ಸಮಗ್ರ ಮಾಹಿತಿ ಇದೆ. ಕರ್ನಾಟಕದಲ್ಲಿ, ವಿದ್ಯಾರ್ಥಿಗಳು ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಮುಂದಿನ ಹಂತದ ‘ಪ್ರಿ ಯೂನಿವರ್ಸಿಟಿ ಕಾಲೇಜು’ (ಪಿಯು ಕಾಲೇಜು)/ ಪದವಿ ಪೂರ್ವ ಕಾಲೇಜು ಪ್ರವೇಶ ಪಡೆಯ ಬಹುದು. ಈ ಕೋರ್ಸ್ ನ ಅವಧಿ ೨ ವರ್ಷಗಳು. ವಿದ್ಯಾಭ್ಯಾಸದ ಮುಂದಿನ ಹಂತವಾದ […]
