ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಶಿಲ್ಪಕಲೆಯ ಮಹಾ ಅನುಭೂತಿ: ಹಂಪಿ ವಿಜಯ ವಿಠಲ ದೇವಸ್ಥಾನ
ಹಂಪಿ ಎಂದರೆ ನಮ್ಮ ಕಣ್ಮುಂದೆ ಸುಳಿಯುವುದು ಪುರಾತನ ದೇಗುಲಗಳ ಮಹಾಗುಚ್ಛ. ಪ್ರಾಚೀನಭಾರತೀಯ ಶಿಲ್ಪಕಲೆಯ ಸೊಬಗು-ಸೊಗಸು ಇಲ್ಲಿ ಮೇಳೈಸಿದೆ. ಈ ಎಲ್ಲಾ ದೇಗುಲಗಳಿಗೆಕಲಶವಿಟ್ಟಂತೆ ಇರುವುದು ಸದಾ ಜುಳುಜುಳುಯೆಂದು ಹರಿಯುವ ತುಂಗಭದ್ರ ನದಿ ತಟದದಲ್ಲಿರುವವಿಟಲಾ ಅಥವಾ ವಿಠ್ಠಲ ದೇವಾಲಯ. ಇದೊಂದು ಅತ್ಯಂತ ಪುರಾತನ ದೇಗುಲವಾಗಿದ್ದು, ಇದುಅನನ್ಯ, ಅಸಾಧಾರಣ, ವಿಶಿಷ್ಟ ಬಗೆಯ ವಾಸ್ತುಶಿಲ್ಪ ಮತ್ತು ಸರಿಸಾಟಿಯಿಲ್ಲದಕರಕುಶಲತೆಯ ಶಿಲ್ಪಕಲಾ ವೈಭವಕ್ಕೆ ಜಗತ್ಪ್ರಸಿದ್ಧವಾಗಿದೆ. ಇದು ಹಂಪಿಯ ಅತಿ ದೊಡ್ಡಮತ್ತು ಅತ್ಯಂತ ಜನಪ್ರಿಯ ದೇವಾಲಯ. ಇದು ಹಂಪಿಯ ಈಶಾನ್ಯ ಭಾಗದಲ್ಲಿದೆ. ಈ ದೇಗುಲದ ಶಿಲ್ಪಕಲೆ, ಸೌಂದರ್ಯವನ್ನು […]

ಸುಧಾ ಮೂರ್ತಿ – ಅಸಾಧಾರಣ ಸಾಧಕಿ, ದಾನಿ ಮತ್ತು ಲೇಖಕಿ
ಶ್ರೀಮತಿ ಸುಧಾ ಮೂರ್ತಿ… ಈ ಹೆಸರಿನಲ್ಲಿಯೇ ಅದೇನೋ ಒಂದು ಆಕರ್ಷಣೆ ಇದೆ. ಕನ್ನಡ ಮಣ್ಣಿನ ಕುವರಿ, ಅಸಾಮಾನ್ಯ ಸಾಧಕಿ ಇವರು. ಇದರ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ನ ಖ್ಯಾತ ಬರಹಗಾರ್ತಿ, ಸಮಾಜಸೇವಕಿಯೂ ಆಗಿರುವ ಸುಧಾ ಮೂರ್ತಿಯವರು ಜನಿಸಿದ್ದು 19ನೇ ಆಗಸ್ಟ್ 1950ರಂದು. ಅವರು ಜನಸಾಮಾನ್ಯನ ಏಳಿಗೆಗಾಗಿ ಹಲವು ಸಂಘ ಸಂಸ್ಥೆಗಳೊಂದಿಗೆ ದುಡಿದವರು. ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ, ಸಮಾಜ ಸೇವೆಯೊಂದಿಗೆ, ಜನ ಸಾಮಾನ್ಯರ ಸಮಸ್ಯೆಗಳಿಗೆ ಮಿಡಿದವರು ಅವರು. ಸುಧಾ ಮೂರ್ತಿ. ಚಿತ್ರ ಕೃಪೆ: ರಾಜಗೋಪಾಲ್ ಸುಧಾ ಮೂರ್ತಿ…ಇವರು […]

ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಲು ತಯಾರಿ ಹೇಗಿದೆ ಗೊತ್ತಾ?
ಕೋವಿಡ್ ೧೯ ನಿಂದ ಬಾಧಿತವಾಗಿರುವ ಕರ್ನಾಟಕದಲ್ಲಿ ಕೋವಿಡ್ ೧೯ ಲಸಿಕೆ ಹಂಚಿಕೆ ಸಂಬಂಧ ಸರಕಾರ ನಡೆಸಿರುವ ಸಿದ್ಧತೆಗಳೇನು? ಕೇಂದ್ರ ಸರಕಾರದಿಂದ ಅನುಮೋದನೆಗೊಂಡ ಲಸಿಕೆಗಳನ್ನು ಆ ಬಳಿಕ ಕರ್ನಾಟಕದಲ್ಲಿ ಹಂಚುವಿಕೆ ಸಂಬಂಧ ಮೇಲ್ವಿಚಾರಣೆಗೆ ಒಂದು ಹೈ ಪವರ್ ಸಮಿತಿಯನ್ನು ರಚಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೋವಿಡ್ ೧೯ ಲಸಿಕೆ ಕಾರ್ಯಕ್ರಮದ ಸಿದ್ಧತೆಗಳು: ಕರ್ನಾಟಕದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ರಾಜ್ಯದ ಕೋವಿಡ್ ೧೯ ಲಸಿಕೆ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯುರಪ್ಪ ಅವರು ಕೋವಿಡ್ ೧೯ ವಿರುದ್ಧದ ಹೋರಾಟದ […]
