ಅತ್ಯಂತ ಅಗ್ಗದ ನವೀಕರಣ ಗೊಳ್ಳಬಹುದಾದ ಶಕ್ತಿ ಮೂಲವೆಂದರೆ ಅದು ಸೌರ ಶಕ್ತಿ. ಇದನ್ನು ಗಮನದಲ್ಲಿಟ್ಟುಕೊಂಡು, ದೇಶದ ಮನೆ ಮನೆಯನ್ನು ಸೌರ ಶಕ್ತಿಯ ಮೂಲಕ ಬೆಳಗಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯೇ ಪಿಎಂ-ಸೂರ್ಯ ಘರ್ಃ ಮುಫ್ತ್ ಬಿಜ್ಲಿ ಯೋಜನಾ. ಪ್ರಧಾನಿ ಶ್ರೀ ನರೇಂದ್ರ ಮೋದಿ … [Read More...]
Featured Story

ಇ-ಶ್ರಮ್: ಒಂದು ಕಾರ್ಡ್- ಹಲವು ಉಪಯೋಗ
ವ್ಯಾಪಾರ ಸೇರಿದಂತೆ, ಅಸಂಘಟಿತ ವಲಯದಲ್ಲಿ, ಈ ದೇಶದಲ್ಲಿ ದೊಡ್ಡ ಸಂಖ್ಯೆಯ ಜನ ದುಡಿಯುತ್ತಿದ್ದಾರೆ. ಅವರಿಗೆ ಸಾಮಾಜಿಕ ಭದ್ರತೆ ಹಾಗು ಇತರ ಅನುಕೂಲಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಜಾರಿಗೆ ತಂದಿರುವ ಹೊಸ ವ್ಯವಸ್ಥೆಯೇ ಇ ಶ್ರಮ್ … [Read More...]

ಕರ್ನಾಟಕ ಲೋಕಸಭಾ ಚುನಾವಣೆ: ಕುತೂಹಲಕಾರಿ ಸಂಗತಿಗಳು
2024ರ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. 2019ರ ಲೋಕ ಸಭಾ ಚುನಾವಣೆಯಲ್ಲಿ, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ, ಆಡಳಿತಾರೂಢ ಬಿಜೆಪಿ 26 ಸ್ಥಾನಗಳನ್ನು ಗೆದ್ದಿತ್ತು. ಅಂದು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ … [Read More...]
Featured Story
Featured Story
Featured Story

ಆನ್ಲೈನ್ ಮೂಲಕ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿ
ಬೆಂಗಳೂರು ಆಸ್ತಿ ತೆರಿಗೆ, ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಆಸ್ತಿ ಮಾಲೀಕರಿಂದ ಸಂಗ್ರಹಿಸುವ ಒಂದು ಸ್ಥಳೀಯ ತೆರಿಗೆಯಾಗಿದೆ. ಈ ತೆರಿಗೆ ಹಣವನ್ನು ನಗರದಲ್ಲಿ ನಾನಾ ಸೇವೆಗಳನ್ನು ಒದಗಿಸಲು ಬಳಸಲಾಗುತ್ತದೆ. ಈ ಸ್ಥಳೀಯ ತೆರಿಗೆಗಳೆಂದರೆ, ರಸ್ತೆ ನಿರ್ವಹಣೆ, ಉದ್ಯಾನವನಗಳ ನಿರ್ವಹಣೆ, ಒಳಚರಂಡಿಗಳು, ಬೀದಿ ದೀಪ ನಿರ್ವಹಣೆ, ಇತ್ಯಾದಿಗಳು. ಬೆಂಗಳೂರಿನ ನಿವಾಸಿಗಳು ಈ ಆಸ್ತಿ ತೆರಿಗೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಪಾವತಿಸಬೇಕಾಗುತ್ತದೆ. ಈ ಲೇಖನದಲ್ಲಿ ನಾವು, ಆನ್ಲೈನ್ನಲ್ಲಿ ನಿಮ್ಮ ಆಸ್ತಿ ತೆರಿಗೆ ಪಾವತಿಸುವ ಮಾಹಿತಿಯನ್ನು ನೀಡುತ್ತೇವೆ. ಆಸ್ತಿತೆರಿಗೆಯನ್ನುಪಾವತಿಸುವಎರಡುವಿಧಾನಗಳು ನಮ್ಮ […]

ಸಕಲ ಭಾಗ್ಯವಿದಾತೆ ಗೊರವನಹಳ್ಳಿ ಮಹಾಲಕ್ಷ್ಮಿ
ನಮ್ಮ ದೇಶದಲ್ಲಿ ನಮ್ಮ ರಾಜ್ಯ ಪ್ರವಾಸಿಗರ ಆಕರ್ಷಣೆಯಲ್ಲಿ ನಾಲ್ಕನೇ ಅತ್ಯಂತ ಜನಪ್ರಿಯ ತಾಣ ಎಂದೇ ಪ್ರಸಿದ್ದಿಯಾಗಿದೆ. ಇದಕ್ಕೆ ಬಹು ಮುಖ್ಯ ಕಾರಣವೆಂದರೆ, ನಮ್ಮ ರಾಜ್ಯದ ಪ್ರವಾಸಿ ತಾಣಗಳು ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿವೆ. ಅದರಲ್ಲಿಯೂ ಇಲ್ಲಿನ ಆಧ್ಯಾತ್ಹ್ಮಿಕ ಕ್ಷೇತ್ರಗಳಿಗೆ ಎಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಒಂದು ಪ್ರಸಿದ್ಧ ದೇಗುಲವೆಂದರೆ, ತುಮಕೂರು ಜಿಲ್ಲೆಯ ಕೊರಟಗೆರೆಯ ಗೊರವನಹಳ್ಳಿಯಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ. ಈ ದೇಗುಲದ ಹೆಸರೇ ಸೂಚಿಸುವಂತೆ, ಈ ದೇವಾಲಯವು ಭಗವಾನ್ ಶ್ರೀ ಮಹಾವಿಷ್ಣುವಿನ ಪತ್ನಿ ಮತ್ತು […]

ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್
ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರು ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ. ವಿಶ್ವದಾದ್ಯಂತ ಬೆಂಗಳೂರು ಸಾಕಷ್ಟು ಪ್ರಸಿದ್ಧಿ ಪಡೆದಿದೆ. ದೇಶ ಯುವಜನರು ಉದ್ಯೋಗಾವಕಾಶಗಳನ್ನು ಅರಸುವಾಗ ಅವರ ಮನಸ್ಸಿನಲ್ಲಿ ಮೂಡುವುದು ಮೊದಲಿಗೆ ಬೆಂಗಳೂರಿನ ಹೆಸರು. ಮಾಹಿತಿ ತಂತ್ರಜ್ಞಾನ, ಕೈಗಾರಿಕೆಗಳು, ಸ್ಟಾರ್ಟ್ ಅಪ್, ಶೈಕ್ಷಣಿಕ ವಲಯ ಹೀಗೆ ಬೆಂಗಳೂರು ಹತ್ತು ಹಲವು ಕ್ಷೇತ್ರಗಳಲ್ಲಿ ಇಂದು ವಿಶ್ವವ್ಯಾಪ್ತಿಯಾಗಿದೆ. ಆದರೆ ಈ […]
